ನಲಿಕೆಯವರ ಸಮಾಜ ಸೇವಾ ಸಂಘದಿಂದ ಪೊಲೀಸ್ ವೃತ್ತನಿರೀಕ್ಷರ ಭೇಟಿ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ನಲಿಕೆಯವರ ಸಮಾಜ ಸೇವಾ ಸಂಘದ ತಾಲೂಕು ಪದಾಧಿಕಾರಿಗಳನ್ನೊಳಗೊಂಡ ನಿಯೋಗವೊಂದು ಇತ್ತೀಚೆಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅಧಿಕಾರ ಸ್ವೀಕರಿಸಿಕೊಂಡ ನೂತನ ಪೊಲೀಸ್ ವೃತ್ತನಿರೀಕ್ಷಕಾರದ ಶಿವಕುಮಾರ್ ಅವರನ್ನು ಭೇಟಿ ಮಾಡಿ ಪರಿಚಯಿಸಿಕೊಂಡು ಸಮುದಾಯದ ಪರವಾಗಿ ಪುಷ್ಪಗುಚ್ಛ ನೀಡಿ ಗೌರವಿಸಿ ಸೇವಾವಧಿಗೆ ಶುಭಹಾರೈಸಲಾಯಿತು.ಈ ಸಂದರ್ಭ ನಿಯೋಗದಲ್ಲಿ ನಲಿಕೆಯವರ ಸಮಾಜ ಸೇವಾ ಸಂಘದ ತಾಲೂಕು ಸಂಘದ ಅಧ್ಯಕ್ಷ ಯಸ್. ಪ್ರಭಾಕರ ಶಾಂತಿಕೋಡಿ, ಉಪಾಧ್ಯಕ್ಷ ರಾಮು ಶಿಶಿಲ, ಮಾಜಿ ಕಾರ್ಯದರ್ಶಿ ಅನಂತ್ ಮುಂಡಾಜೆ, ಯುವ ವೇದಿಕೆ ಮಾಜಿ ಕಾರ್ಯದರ್ಶಿ ರಮೇಶ್ […]

ಪರಿಶಿಷ್ಟ ಪಂಗಡದ ಸ್ತ್ರೀಶಕ್ತಿ ಗುಂಪಿನ ಸದಸ್ಯರಿಗೆ ತರಬೇತಿ

ಬೆಳ್ತಂಗಡಿ: ಅಂಗನವಾಡಿ ಕಾರ್ಯಕರ್ತೆಯರು, ಮೇಲ್ವಿಚಾರಕರು ಮತ್ತು ಸ್ತ್ರೀಶಕ್ತಿ ಒಕ್ಕೂಟದ ಪದಾಧಿಕಾರಿಗಳು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿಗಾಗಿ ಶ್ರಮಿಸುತ್ತಿದ್ದು, ಇದರೊಂದಿಗೆ ಸರಕಾರದ ಸೌಲಭ್ಯಗಳ ಮಾಹಿತಿಯನ್ನು ಪಡೆದುಕೊಂಡು ಕಟ್ಟಕಡೆಯ ಕುಟುಂಬಗಳಿಗೂ ಸರಕಾರದ ಸೌಲಭ್ಯ ಸಿಗುವಂತೆ ಮಾಡುವ ಮೂಲಕ ಸಬಲೀಕರಣಕ್ಕೆ ನೆರವಾಗಬೇಕು ಎಂದು ತಾಲೂಕು ಸಮಾಜಕಲ್ಯಾಣಾಧಿಕಾರಿ ಹೇಮಚಂದ್ರ ಹೇಳಿದರು.ಅವರು ಆಗಸ್ಟ್ 4ರಂದು ಬೆಳ್ತಂಗಡಿಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖಾ ಕಚೇರಿಯಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬೆಳ್ತಂಗಡಿ, ತಾಲೂಕು ಸ್ತ್ರೀಶಕ್ತಿ ಒಕ್ಕೂಟ (ರಿ.) ಬೆಳ್ತಂಗಡಿ […]

ಟೈಲರ್ಸ್ ಎಸೋಸಿಯೇಷನ್‌ನಿಂದ ‘ಆಟಿಡೊಂಜಿ ದಿನ’

ಬೆಳ್ತಂಗಡಿ: ಟೈಲರ್ಸ್ ಎಸೋಸಿಯೇಷನ್ ವಲಯ ಸಮಿತಿಗಳು ಜಿಲ್ಲಾ ಸಂಘದ ಆಧಾರ ಸ್ತಂಭಗಳು. ರಾಜ್ಯದಲ್ಲಿ 9500  ಸದಸ್ಯರಿದ್ದು, ಸರಕಾರದಿಂದ ಸಿಗುವ ಸೌಲಭ್ಯಗಳನ್ನು ಪಡೆಯುವಲ್ಲಿ ಹಿಂದುಳಿದಿದ್ದೇವೆ. ವಲಯ ಪದಾಧಿಕಾರಿಗಳು ಸದಸ್ಯರನ್ನು ಸಂಪರ್ಕಿಸಿ, ಸೌಲಭ್ಯಗಳ ಮಾಹಿತಿ ನೀಡಬೇಕು. ಪ್ರತಿಯೊಬ್ಬರೂ ಸಂಘಟನೆಯಲ್ಲಿ  ತಮ್ಮನ್ನು ಸಕ್ರಿಯವಾಗಿ  ತೊಡಗಿಸಿಕೊಂಡು ಸಂಘಟನೆ ಭದ್ರ ಪಡಿಸುವ ಹೊಣೆ ನಮ್ಮದು.  ಕಾರ್ಯಚಟುವಟಿಕೆಗಳಿಗೆ ಎಲ್ಲರ ಸಹಕಾರ ಮುಖ್ಯ ಎಂದು ಕರ್ನಾಟಕ ಸ್ಟೇಟ್ ಟೈಲರ್ಸ್ ಅಸೋಸಿಯೇಷನ್ ಜಿಲ್ಲಾಧ್ಯಕ್ಷ ಪ್ರಜ್ವಲ್ ಕುಮಾರ್  ನುಡಿದರು.                        […]

ಡಾ. ಶಾಂತಾರಾಮ ಪ್ರಭುಗಳಿಗೆ ಕುರಿಯ ಪ್ರಶಸ್ತಿ

ಬೆಳ್ತಂಗಡಿ: ಎಡನೀರು ಶ್ರೀ ಕೇಶವಾನಂದ ಭಾರತೀ ಶ್ರೀಗಳವರ ಪ್ರಥಮ ಆರಾಧನಾಸ್ಮೃತಿ ಹಾಗೂ ಶ್ರೀ ಸಚ್ಚಿದಾನಂದ ಭಾರತೀ ಶ್ರೀಗಳವರ ಪ್ರಥಮ ಚಾತುರ್ಮಾಸ್ಯ ಗೌರವಾರ್ಥ  ಉಜಿರೆಯ ಕುರಿಯ ವಿಠಲ ಶಾಸ್ತ್ರೀ ಸಾಂಸ್ಕೃತಿಕ ಪ್ರತಿಷ್ಠಾನ ಹಮ್ಮಿಕೊಂಡಿದ್ದ ಯಕ್ಷಗಾನ ತಾಳಮದ್ದಳೆ ಸಪ್ತಾಹದ ಸಮಾರೋಪ  ಸಮಾರಂಭದಲ್ಲಿ ಹಿರಿಯ ಕಲಾವಿದ, ವಿದ್ವಾಂಸ ಡಾ. ನಿಟ್ಟೂರು ಶಾಂತಾರಾಮ ಪ್ರಭು ಅವರಿಗೆ  ಶ್ರೀ ಸಚ್ಚಿದಾನಂದ ಭಾರತೀಶ್ರೀಗಳವರು ಕುರಿಯ ಪ್ರಶಸ್ತಿ ಪ್ರಧಾನ ಗೈದರು.        ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ಡಾ. ಶಾಂತಾರಾಮ ಪ್ರಭು, ಕುರಿಯ ವಿಠಲ ಶಾಸ್ತ್ರಿಗಳು ಧರ್ಮಸ್ಥಳ ಮೇಳದ ಸಂಚಾಲಕರಾಗಿ, […]

ಮೇಲಂತ ಬೆಟ್ಟು ಸರಕಾರಿ ಕಾಲೇಜಿಗೆ ಕಂಪ್ಯೂಟರ್ ಕೊಡುಗೆ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿ, ರೋಟರಿ ಕ್ಲಬ್ ಮಡಂತ್ಯಾರು, ರೋಟರಿ ಕ್ಲಬ್ ಮಂಗಳೂರು ಮಿಡ್‌ಟೌನ್, ರೋಟರಿ ಕ್ಲಬ್ ಮಂಗಳೂರು ಡೌನ್‌ಟೌನ್, ರೋಟರಿ ಕ್ಲಬ್ ಮಂಗಳೂರು ಸೀ ಸೈಡ್ ಹಾಗೂ ಪ್ರಖ್ಯಾತ ಕೋಗ್ನಿಸೆಂಟ್ ಕಂಪೆನಿ ಇವುಗಳ ಪ್ರಾಯೋಜಕತ್ವದಲ್ಲಿ ರೋಟರಿ ಜಿಲ್ಲೆ 3181ರ 2022-23 ನೇ ಸಾಲಿನ ನೀಯೋಜಿತ ಗವರ್ನರ್ ಎಚ್. ಆರ್. ಕೇಶವ್ ಅವರ ನೇತೃತ್ವದಲ್ಲಿ , ರೋಟರಿ ಸಹಕಾರಿತ ಯೋಜನೆಯಡಿಯಲ್ಲಿ ಬೆಳ್ತಂಗಡಿಯ ಸರಕಾರಿ ಪ್ರಥಮ ದರ್ಜೆ ಕಾಲೇಜು ಮೇಲಂತಬೆಟ್ಟುಗೆ ರೂಪಾಯಿ 4,50,000ಮೌಲ್ಯದ 15 ಕಂಪ್ಯೂಟರ್‌ಗಳನ್ನು ಕೊಡುಗೆಯಾಗಿ ಕೊಡಲಾಯಿತು. […]

ಓಡೀಲು ದೇಗುಲದ ಪರಿಸರದಲ್ಲಿ ಸ್ವಚ್ಛತಾ ಕಾರ್ಯ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ. ಸಿ. ಟ್ರಸ್ಟ್ ಮಡಂತ್ಯಾರು ವಲಯ ಹಾಗೂ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಸಹಭಾಗಿತ್ವದಲ್ಲಿ ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸುತ್ತ ಮುತ್ತ ಆಗಸ್ಟ್ 3ರಂದು ಸ್ವಚ್ಚತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು‌. ಈ ಸಂದರ್ಭದಲ್ಲಿ ದೇಗುಲದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ ಹಾಗೂ ವ್ಯವಸ್ಥಾಪನಾ ಸಮಿತಿಯ ಸದಸ್ಯರು, ಕುವೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪ್ರದೀಪ್ ಶೆಟ್ಟಿ, ಒಕ್ಕೂಟದ ಅಧ್ಯಕ್ಷೆ ಸುಮಂಗಳ ಪ್ರಭು, ಮೇಲ್ವಿಚಾರಕ ಮಧು […]

ಭಜನಾ ತಂಡಗಳ ಅಧ್ಯಕ್ಷ-ಕಾರ್ಯದರ್ಶಿಗಳ ಸಭೆ

ಬೆಳ್ತಂಗಡಿ: ಹಿಂದೂ ಸಮಾಜಕ್ಕೆ ಶಕ್ತಿ ನೀಡುವ ಕಾರ್ಯ ಭಜನಾ ಮಂಡಳಿಗಳಿಂದಾಗಿದೆ. ಭಜನಾ ಮಂದಿರಗಳ ಅಸ್ತಿತ್ವ ಉಳಿಸುವ ನಿಟ್ಟಿನಲ್ಲಿ ಸರಕಾರಿ ದಾಖಲೆಗಳನ್ನು ಸರಿಪಡಿಸುವ ಜತೆಗೆ ಸಂಪೂರ್ಣ ಮೂಲ ಸೌಕರ್ಯ ಅಭಿವೃದ್ಧಿಗೆ ಕಂದಾಯ ಸಚಿವ ಆರ್. ಅಶೋಕ್ ಅವರೊಂದಿಗೆ ಮಾತುಕತೆ ನಡೆಸಲಾಗಿದೆ ಎಂದು ಶಾಸಕ ಹರೀಶ್ ಪೂಂಜ ಹೇಳಿದರು.ಬೆಳ್ತಂಗಡಿ ತಾಲೂಕಿನ ಭಜನಾ ಮಂದಿರಗಳ ಮೂಲ ಸೌಕರ್ಯಗಳ ಕುರಿತು ಮಂದಿರ ಅಧ್ಯಕ್ಷರ ಹಾಗೂ ಕಾರ್ಯದರ್ಶಿಗಳ ಜತೆ ಬೆಳ್ತಂಗಡಿ ಶ್ರೀ ಮಂಜುನಾಥ ಸ್ವಾಮಿ ಸಭಾಭವನದಲ್ಲಿ ಆಗಸ್ಟ್ 1ರಂದು ನಡೆಸಲಾದ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.ಮಂದಿರಗಳಿಗೆ […]

ಬೆಳಾಲಿನಲ್ಲಿ ಕೋವಿಡ್ ಸಹಾಯಹಸ್ತ ಕಾರ್ಯಕ್ರಮ ಮಾಹಿತಿ

ಬೆಳ್ತಂಗಡಿ: ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಬೆಳ್ತಂಗಡಿ ವತಿಯಿಂದ ಬೆಳಾಲು ಗ್ರಾಮ ಸಮಿತಿಯ ಸಭೆ ಹಾಗೂ ಕೋವಿಡ್ ಸಹಾಯ ಹಸ್ತ ಕಾರ್ಯಕ್ರಮದ ಮಾಹಿತಿ ಕಾರ್ಯಕ್ರಮವು ಆಗಸ್ಟ್ 2ರಂದು ಬೆಳಾಲು ಮೈತ್ರಿ ಯುವಕ ಮಂಡಲದಲ್ಲಿ ನಡೆಯಿತು.ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಧ್ಯಕ್ಷರಾದ ಡಿ. ಕೆ. ಶಿವಕುಮಾರ್‌ರವರ ನಿರ್ದೇಶನದಂತೆ ಪ್ರತೀ ಗ್ರಾಮ ಮಟ್ಟದಲ್ಲೂ ಕೋವಿಡ್ ಸಹಾಯ ಹಸ್ತ ಎಂಬ ಕಾರ್ಯಕ್ರಮದ ಅನುಷ್ಠಾನ ಮಾಡಿದ್ದು, ಅದರ ಮಾಹಿತಿಯನ್ನ ಗ್ರಾಮೀಣ ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷ ರಂಜನ್ ಜಿ. ಗೌಡರವರು ಸಭೆಗೆ ನೀಡಿದರು. ಈ ಸಭೆಯಲ್ಲಿ ಕೊರೊನದಿಂದ […]

ಕೊಕ್ರಾಡಿಯಲ್ಲಿ ‘ಆಷಾಡ ಮಾಸದಲ್ಲಿ ಒಂದು ದಿನ’

ಬೆಳ್ತಂಗಡಿ: ಶ್ರೀ  ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ ಯೋಜನೆಯ ಗುರುವಾಯನಕೆರೆ ಯೋಜನಾ ಕಚೇರಿಯ ನಾರಾವಿ ವಲಯದ ಕೊಕ್ರಾಡಿ ಹಾಗೂ ಸಾವ್ಯ ಕಾರ್ಯಕ್ಷೇತ್ರದ ಬನಶಂಕರಿ ಹಾಗೂ ನಿಸರ್ಗ ಜ್ಞಾನವಿಕಾಸ ಕೇಂದ್ರದ ‘ಆಷಾಢ ಮಾಸದಲ್ಲಿ ಒಂದು ದಿನ’ ಕಾರ್ಯಕ್ರಮವನ್ನು ಕೊಕ್ರಾಡಿ ಶಾರದಾಂಭಾ ಯುವಕ ಮಂಡಲದಲ್ಲಿ ಮರದ ಕಳ ಸೆಗೆ ಭತ್ತ ತುಂಬಿಸುವ ಮೂಲಕ ವೇದಿಕೆಯಲ್ಲಿರುವ ಗಣ್ಯರು ಉದ್ಘಾಟಿಸಿದರು.ತಾಲೂಕಿನ ಯೋಜನಾಧಿಕಾರಿ ಯಶವಂತ ಯಸ್.  ಪ್ರಸ್ತಾವಿಸಿ, ಹಿಂದಿನ ಕಾಲದಲ್ಲಿ ಹಿರಿಯರು ಆಷಾಢ ಮಾಸದಲ್ಲಿ ಅರೋಗ್ಯವರ್ಧಕ ಆಹಾರ ಪದ್ಧತಿಗಳನ್ನು ಅನುಸ ರಿಸುತಿದ್ದು ಇದನ್ನು ಮುಂದಿನ ಯುವಪೀಳಿಗೆಗೆ ಇಂದಿನ ಮಹಿಳೆಯರು ವರ್ಗಾಯಿಸ […]

ಮುಂಡಾಜೆ ರೋಟರಿ ಸಮುದಾಯದಳ ಪದಗ್ರಹಣ

ಬೆಳ್ತಂಗಡಿ: ರೋಟರಿ ಕ್ಲಬ್ ಬೆಳ್ತಂಗಡಿಯ ಅಂಗಸಂಸ್ಥೆಯಾದ ಮುಂಡಾಜೆ ರೋಟರಿ ಸಮುದಾಯ ದಳದ 2021-22ನೇ ಸಾಲಿನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮವು ಮುಂಡಾಜೆ  ಶ್ರೀ ಸನ್ಯಾಸಿಕಟ್ಟೆ ಪರಶುರಾಮ ದೇವಸ್ಥಾನದ ಸಭಾಭವನದಲ್ಲಿ ಜರುಗಿತು. ಬೆಳ್ತಂಗಡಿ ರೋಟರಿ ಕ್ಲಬ್‌ನ ಅಧ್ಯಕ್ಷ ಶರತ್‌ಕೃಷ್ಣ ಪಡುವೆಟ್ನಾಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಾ, ಸೇವೆಯಲ್ಲಿ ತೊಡಗಿದವರಿಗೆ ಸವಾಲುಗಳಿವೆ. ಸವಾಲುಗಳನ್ನು ಎದುರಿಸಿ ಕೆಲಸ ಮಾಡಿದರೆ ತಕ್ಕ ಪ್ರತಿಫಲ ಸಿಗುತ್ತದೆ. ಸಮಾಜದ ಅಭಿವೃದ್ಧಿಗಾಗಿ ದುಡಿಯುವ ಸಂಘ-ಸಂಸ್ಥೆಗಳು ಗೌರವಕ್ಕೆ ಅರ್ಹವಾಗಿರುತ್ತವೆ ಎಂದು ಹೇಳಿದರು.ಬೆಳ್ತಂಗಡಿ ರೋಟರಿ ಕ್ಲಬ್ ಕಾರ್ಯದರ್ಶಿ ಅಬೂಬಕರ್, ನಿಕಟಪೂರ್ವ ಅಧ್ಯಕ್ಷ ಬಿ. ಕೆ. […]