ಕೋವಿಡ್ ನಿರ್ವಹಣೆಯಲ್ಲಿ ಭಾರೀ ಗೋಲ್ಮಾಲ್-ಜೀವ ಪಣಕ್ಕಿಟ್ಟು ಕರ್ತವ್ಯ ನಿರ್ವಹಿಸುವ ದಾದಿಯರಿಗಿಲ್ಲ ಕನಿಷ್ಠ ಆರೋಗ್ಯ ರಕ್ಷಾ ಕವಚ

ಬೆಳ್ತಂಗಡಿ: ಧರ್ಮಸ್ಥಳ ಗ್ರಾಮ ಪಂಚಾಯತ್ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಯೋಗದಲ್ಲಿ ಧರ್ಮಸ್ಥಳ ಅಶೋಕನಗರ ದಲಿತ ಕಾಲನಿಯ ನಿವಾಸಿಗರಿಗಾಗಿ ಇಲ್ಲಿಯ ಸೂರ್ಯ ಸಭಾಭವನ ಹಾಗೂ ಆಶ್ರಮ ಶಾಲೆಯ ಸಭಾಂಗಣದಲ್ಲಿ ಜೂನ್ 16ರಂದು ಕೊವಿಡ್ ಪರೀಕ್ಷೆಯನ್ನು ಹಮ್ಮಿಕೊಳ್ಳಲಾಗಿತ್ತು. ಧರ್ಮಸ್ಥಳ ಪ್ರಾಥಮಿಕ ಆರೋಗ್ಯ ಕೇಂದ್ರದ ದಾದಿಯರು ಇಲ್ಲಿ ಕೋವಿಡ್ ಪರೀಕ್ಷೆಗೆ ಗಂಟಲದ್ರವವನ್ನು ಆರೋಗ್ಯ ರಕ್ಷಾ ಕವಚಗಳಾದ ಪಿಪಿಇ ಕಿಟ್ ಹಾಗೂ ಗ್ಲೌಸ್ ಧರಿಸದೇ ಸಂಗ್ರಹಿಸುವ ಮೂಲಕ ತಾವೂ ಅಪಾಯವನ್ನು ಆಹ್ವಾನಿಸಿಕೊಂಡರಲ್ಲದೇ; ಕೊರೋನಾ ಸೋಂಕಿನ ವಿರುದ್ಧ ಮುಂಜಾಗ್ರತಾ ಕ್ರಮಗಳ ಬಗ್ಗೆ ದಲಿತ […]
ಚೇತನ್ ವಿರುದ್ಧ ಸಂಘ ಪರಿವಾರದ ಪಿತೂರಿಗೆ ಖಂಡನೆ

ಬೆಳ್ತಂಗಡಿ: ಬ್ರಾಹ್ಮಣ್ಯದ ಅಪಾಯಕಾರಿ ಬಗ್ಗೆ ಜಾಗೃತಿಗಾಗಿ ಅಂಬೇಡ್ಕರ್, ಪೆರಿಯಾರ್, ಬಸವಣ್ಣ ಅವರ ಹೇಳಿಕೆಗಳನ್ನು ಮತ್ತೊಮ್ಮೆ ನೆನಪಿದ ಚಲನಚಿತ್ರ ನಟ, ಯುವ ಹೋರಾಟಗಾರ ಚೇತನ್ ಅಹಿಂಸಾ ಅವರ ವಿರುದ್ಧ ಸಂಘಪರಿವಾರ ವ್ಯವಸ್ಥಿತ ಪಿತೂರಿ ನಡೆಸುತ್ತಿದೆ ಎಂದು ಆದಿವಾಸಿ ಹಕ್ಕುಗಳ ಸಮನ್ವಯ ಸಮಿತಿ ಸಂಚಾಲಕ ಶೇಖರ್ ಲಾಯಿಲ ಆರೋಪಿಸಿದ್ದಾರೆ.12 ಶತಮಾನದಲ್ಲಿಯೇ ಬಸವಣ್ಣ ಬ್ರಾಹ್ಮಣ್ಯದ ಅಪಾಯದ ಬಗ್ಗೆ ವಚನ ಚಳವಳಿ ನಡೆಸಿದ್ದಾರೆ. ಮುಂದುವರಿದ ಭಾಗವಾಗಿ ಪೆರಿಯಾರ್ ಅವರು ಬ್ರಾಹ್ಮಣ್ಯದ ವಿರುದ್ಧ ತೀವ್ರ ಸ್ವರೂಪದ ಹೋರಾಟ ನಡೆಸಿದರು. ನಂತರ ಅಂಬೇಡ್ಕರ್ ಅವರು ಬ್ರಾಹ್ಮಣ್ಯದ […]
ಕಡವೆಯ ರಕ್ಷಣೆಗೆ ನಿಂತ ಶೌರ್ಯ ಸ್ವಯಂಸೇವಕ

ಬೆಳ್ತಂಗಡಿ: ಧರ್ಮಸ್ಥಳ ನೇತ್ರಾವತಿ ಸಮೀಪದಲ್ಲಿ ಜೂನ್ 17ರಂದು ಕಡವೆಯೊಂದು ವಾಹನಕ್ಕೆ ಡಿಕ್ಕಿ ಹೊಡೆದು ತೀವ್ರ ಗಾಯಗೊಂಡಿತ್ತು. ಇದನ್ನು ಗಮನಿಸಿದ ಶೌರ್ಯ ವಿಪತ್ತು ನಿರ್ವಹಣಾ ಘಟಕ ಧರ್ಮಸ್ಥಳದ ಧರ್ಮಸ್ಥಳ ವಲಯದ ಸ್ವಯಂಸೇವಕ ಸ್ನೇಕ್ ಪ್ರಕಾಶ್ ಸ್ಥಳೀಯರೊಂದಿಗೆ ಸೇರಿ ಪ್ರಥಮ ಚಿಕಿತ್ಸೆ ಒದಗಿಸಿದ್ದಾರೆ. ಬಳಿಕ ಅರಣ್ಯ ಇಲಾಖೆಯ ಸಿಬ್ಬಂದಿಗಳಿಗೆ ಮಾಹಿತಿ ರವಾನಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಉಜಿರೆಯ ಪಶು ಆಸ್ಪತ್ರೆಗೆ ಕಡವೆಯನ್ನು ಸಾಗಿಸಿದ್ದಾರೆ. ಸ್ನೇಕ್ ಪ್ರಾಕಾಶ್ ಅವರ ಸಮಯಪ್ರಜ್ಞೆಯಿಂದ ಕಡವೆ ಪ್ರಾಣಾಪಾಯದಿಂದ ಪಾರಾಗಿದೆ.ವರದಿ : ಸ್ವಸ್ತಿಕ್ ಕನ್ಯಾಡಿ
ಈ ಸಾವು ನ್ಯಾಯವೇ…?ಲಾಕ್ಡೌನ್ನಿಂದ ಖಿನ್ನತೆಗೊಳಗಾದ ವ್ಯಕ್ತಿಯನ್ನು ಸೆಳೆದೊಯ್ದ ವಿಧಿ!

ಬೆಳ್ತಂಗಡಿ: ಬೆಳ್ತಂಗಡಿಯ ಸುವರ್ಣ ಪ್ರಿಂಟರ್ಸ್ನ ಮಾಲಕ, ಸಮಾಜಮುಖೀ ಚಿಂತಕ ಗಣೇಶ್ ಸುವರ್ಣ ಜೂನ್ 14ರಂದು ಕಾಲನ ಕರೆಗೆ ಓಗೊಟ್ಟು ವಿಧಿವಶರಾಗಿದ್ದಾರೆ. ಇವರ ಅಕಾಲಿಕ ಮರಣ ಇನ್ನೂ ಜೀವಂತವಿರುವ ಸಮಾಜಕ್ಕೆ ಹತ್ತಾರು ಪ್ರಶ್ನೆಗಳನ್ನು ಸೃಷ್ಟಿಸಿ ಹೋಗಿದೆ. ಈ ಪ್ರಶ್ನೆಗಳಿಗೆ ಉತ್ತರ ಕಂಡುಕೊಳ್ಳದೇ ಹೋದಲ್ಲಿ ತದ್ರೂಪಿ ಸಮಸ್ಯೆಗೆ ಇನ್ನಷ್ಟು ಪ್ರಾಣ ಬಲಿಯಾಗಬೇಕಾದೀತು.ಮೇಲ್ನೋಟಕ್ಕೆ ಗಣೇಶ್ ಸುವರ್ಣರ ಸಾವು ಹಾರ್ಟ್ ಅ್ಯಟಾಕ್ನಿಂದ ಸಂಭವಿಸಿದೆ. ಆದರೆ ಗಣೇಶ್ ಸುವರ್ಣ ಸತ್ತು ಎರಡು ದಿನಗಳ ತನಕ ಆತನಿಗೆ ಚಿಕಿತ್ಸೆ ನೀಡಿದ ಮಂಗಳೂರಿನ ಪ್ರಖ್ಯಾತ ಆಸ್ಪತ್ರೆಯಾದ ಕೆಎಂಸಿಯ […]
ಪಾಂಗಳ ಮಳೆಯಿಂದ ಹಾನಿಗೊಳಗಾದ ಮನೆಗಳಿಗೆ ಶಾಸಕ ಹರೀಶ್ ಪೂಂಜ ನೆರವು

ಬೆಳ್ತಂಗಡಿ:ತಾಲೂಕಿನ ಕಳೆಂಜ ಗ್ರಾಮದ ಪಾಂಗಾಳ ಎಂಬಲ್ಲಿ ಸುರಿದ ಭಾರಿ ಮಳೆಗೆ ಸುಮಾರು 8 ಮನೆಗಳು ಹಾನಿಗೊಳಗಾಗಿದ್ದ ಪ್ರದೇಶದ ಕುರಿತು ಕಳೆಂಜ ಗ್ರಾ.ಪಂ. ಜನಪ್ರತಿನಿಧಿಗಳು ಶಾಸಕ ಹರೀಶ್ ಪೂಂಜ ಅವರ ಗಮನಕ್ಕೆ ತಂದ ಕೂಡಲೇ, ತಕ್ಷಣ ಸ್ಪಂದಿಸಿದ ಶಾಸಕರು ಧನಸಹಾಯ ಸಹಿತ ತುರ್ತು ಸ್ಪಂದನೆ ನೀಡಿದರು.ಶಾಸಕ ಹರೀಶ್ ಪೂಂಜ ಅವರು ಬೆಂಗಳೂರು ತೆರಳಿದ್ದರಿಂದ ಅವರು ಬೆಳ್ತಂಗಡಿ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಶ್ರೀನಿವಾಸ್ ರಾವ್ ಹಾಗು ತಮ್ಮ ಆಪ್ತ ಕಾರ್ಯದರ್ಶಿ ಅವರಿಗೆ ಸೂಚನೆ ನೀಡಿದ ಮೇರೆಗೆ ಬುಧವಾರ ಹಾನಿಗೊಳಗಾದ […]
ಸೂರು ಕಳೆದುಕೊಳ್ಳುವ ಭೀತಿ ಎದುರಿಸಿದ ಕುಟುಂಬಕ್ಕೆ ಆಸರೆಯಾದ ಮಾಜಿ ಶಾಸಕ ಕೆ. ವಸಂತ ಬಂಗೇರ

ಬೆಳ್ತಂಗಡಿ: ತಾಲೂಕಿನ ಬಂಗಾಡಿ ಉರ್ಲ ಎಂಬಲ್ಲಿ ತೀರಾ ಬಡತನದ ನಡುವೆ ಇಂದೋ ನಾಳೆಯೋ ಎಂಬಂತೆ ಕುಸಿಯುವ ಭೀತಿ ಎದುರಿಸುತ್ತಿರುವ ಕಾನದು ಎಂಬವರ ನಿವಾಸಕ್ಕೆ ಈ ದಿನ ಬೆಳ್ತಂಗಡಿಯ ಮಾಜಿ ಶಾಸಕ ಕೆ. ವಸಂತ ಬಂಗೇರರವರು ತುರ್ತು ಭೇಟಿ ನೀಡಿ ಮನೆಗೆ ಬೇಕಾದ ಅಗತ್ಯ ಆಹಾರ ಸಾಮಗ್ರಿಗಳನ್ನು ಒದಗಿಸಿದರು. ಹಾಗೂ ಕುಸಿತದ ಭೀತಿಯಲ್ಲಿರುವ ಕಾನದುರವರಿಗೆ ತಾತ್ಕಾಲಿಕ ಮನೆಯ ಸೌಲಭ್ಯ ಕಲ್ಪಿಸುವ ಭರವಸೆಯನ್ನು ಸ್ಥಳದಲ್ಲೇ ನೀಡಿ, ಈಗಾಗಲೇ ಮನೆಯ ಆಯ ಸುತ್ತಳತೆಗೆ ಕ್ರಮ ವಹಿಸುವುದಾಗಿಯೂ ನಾಳೆಯೇ ಕೆಲಸ ಕಾರ್ಯ ಆರಂಭಿಸುವುದಾಗಿಯೂ […]
ಅವೈಜ್ಞಾನಿಕ ಕಾಮಗಾರಿಯಿಂದ ರಸ್ತೆಗೆ ಅಡ್ಡವಾಗಿ ಧರಾಶಾಹಿಯಾದ ವಿದ್ಯುತ್ ಕಂಬಗಳು

ಬೆಳ್ತಂಗಡಿ: ವ್ಯಾಪಕ ಮಳೆ ಹಾಗೂ ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದಾಗಿ ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ನೆರಿಯ ಗ್ರಾಮದ ಕಾಟಾಜೆ ಎಂಬಲ್ಲಿ ನಡೆದಿದೆ.ನೆರಿಯ ಗ್ರಾಮದ ಅಣಿಯೂರಿನಿಂದ ಕಾಟಾಜೆ, ಪರ್ಪಳಕ್ಕೆ ಸಂಪರ್ಕಿಸುವ ರಸ್ತೆ ಕಾಮಗಾರಿ ಕಳೆದ ಎಪ್ರಿಲ್ ನಿಂದ ನಡೆಯುತ್ತಿದೆ. ಈ ರಸ್ತೆಯ ಪಕ್ಕದಲ್ಲಿ ವಿದ್ಯುತ್ ಕಂಬಗಳು ಸೇರಿದಂತೆ ಖಾಸಗಿ ವಿದ್ಯುತ್ ಉತ್ಪಾದನಾ ಘಟಕಗಳ ವಿದ್ಯುತ್ ಪೂರೈಕೆ ಕಂಬಗಳು ಇದೆ. ಇಲ್ಲಿ ವಿದ್ಯುತ್ ಕಂಬಗಳ ಬುಡವನ್ನು ಕೊರೆದು ಅವೈಜ್ಞಾನಿಕವಾಗಿ ರಸ್ತೆ ಕಾಮಗಾರಿ ನಡೆಸಲಾಗಿತ್ತು. ಕಳೆದ ಒಂದು ವಾರದಿಂದ ಸುರಿದ ವ್ಯಾಪಕ […]
ಯುವ ಬಂಟರ ಸಂಘದಿಂದ ಆಹಾರದ ಕಿಟ್ ವಿತರಣೆ

ಮೂಡುಬಿದಿರೆ : ಮೂಡುಬಿದಿರೆ ತಾಲೂಕು ಯುವ ಬಂಟರ ಸಃಘದ ವತಿಯಿಂದ ಕೊರೋನಾ ಲಾಕ್ ಡೌನ್ ಸಂದರ್ಭದಲ್ಲಿ ತೀರಾ ಸಂಕಷ್ಟದಲ್ಲಿರುವ ಬಂಟರ ಸಮಾಜದ ಆಯ್ದ 90 ಕುಟುಂಬಗಳಿಗೆ ಆಹಾರದ ಕಿಟ್ ಗಳನ್ನು ವಿತರಿಸುವ ಕಾರ್ಯಕ್ರಮವು ಇಲ್ಲಿನ ಸಮಾಜ ಮಂದಿರ ಸಭಾಭವನದಲ್ಲಿ ನೆರವೇರಿತು.ಆಹಾರದ ಕಿಟ್ ಗಳನ್ನು ವಿತರಿಸಿ ಮಾತನಾಡಿದ ಆಳ್ವಾಸ್ ಶಿಕ್ಷಣ ಪ್ರತಿಷ್ಥಾನದ ಅಧ್ಯಕ್ಷ ಡಾ। ಎಂ. ಮೋಹನ ಆಳ್ವ ಅವರು ಸಮಾಜದಲ್ಲಿ ಅಕ್ಷರಾಭ್ಯಾಸ ಇಲ್ಲದವರು, ತೀರಾ ಸಂಕಷ್ಟದಲ್ಲಿರುವ ಜನರು ಇಂದಿಗೂ ಇದ್ದಾರೆ. ಸಮಾಜದಲ್ಲಿ ಸ್ಥಿತಿವಂತರೆಂದು ಗುರುತಿಸಿಕೊಂಡವರು ತಮ್ಮಲ್ಲಿರುವ ಸಂಪತ್ತಿನ […]
ಹಿಂದು ಸಮಾಜವನ್ನು ಒಡೆಯುವ ನಟ ಚೇತನ್ ಹುನ್ನಾರಕ್ಕೆ ಖಂಡನೆ

ಬೆಳ್ತಂಗಡಿ:ಬೇರೆ ಮತ ಧರ್ಮಗಳ ಹುಳುಕುಗಳನ್ನು ಪ್ರಶ್ನಿಸಲು ಧೈರ್ಯ ತೋರದ ನಟ ಚೇತನ್ ಹಿಂದೂ ಧರ್ಮದ ಒಂದು ಸಮುದಾಯವನ್ನು ಹೀಯಾಳಿಸಿ, ಉಳಿದ ಸಮುದಾಯವನ್ನು ಎತ್ತಿಕಟ್ಟುವ ಪ್ರಯತ್ನ ಮಾಡುತ್ತಿರುವುದನ್ನು ವಿಶ್ವ ಹಿಂದು ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಎಂದು ವಿಶ್ವ ಹಿಂದು ಪರಿಷತ್ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಸುಬ್ರಹ್ಮಣ್ಯ ಕುಮಾರ್ ಅಗರ್ತ ಹೇಳಿದರು.ಅವರು ಜೂನ್ 15ರಂದು ಇಲ್ಲಿನ ಪಿನಾಕಿ ಸಭಾಭವನದಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.ಹಣ ತೆಗೆದುಕೊಂಡು ನಟಿಸುವ ಚೇತನ್ ತನ್ನ ಸ್ವಾರ್ಥಕ್ಕೊಸ್ಕರ ಹೀಯಾಳಿಸುವ ಕೆಲಸ ಮಾಡುತ್ತಿರುವುದು ಖಂಡನೀಯ. ಸಾಮಾಜಿಕ, ಆರ್ಥಿಕ, ಶೈಕ್ಷಣಿಕ […]
ಕುಸಿಯುವ ಭೀತಿಯಲ್ಲಿದ್ದ ಮನೆಗೆ ಎಸ್.ಕೆ.ಎಸ್.ಎಸ್.ಎಫ್ ವಿಖಾಯ ತಂಡದಿಂದ ಮರುಜೀವ

ಮೂಡುಬಿದಿರೆ: ಮೂಡಬಿದಿರೆಯಲ್ಲಿ ಸುರಿಯುತ್ತಿರುವ ಭಾರೀ ಮಳೆಗೆ ಪುತ್ತಿಗೆ ಗ್ರಾಮದ ಪಳಕಳ ಎಂಬಲ್ಲಿ ಒಂದು ಬಡ ಕುಟುಂಬದ ಮನೆಯ ಮಾಡು ಕುಸಿಯುವ ಭೀತಿ ಎದುರಾಗಿತ್ತು. ಮಾಡಿನ ಹಂಚುಗಳು ಸಂಪೂರ್ಣ ಬೀಳುವ ಸ್ಥಿತಿಯಲ್ಲಿರುವುದನ್ನು ಗಮನಿಸಿದ ಸ್ಥಳೀಯ ಪಂಚಾಯತ್ ಸದಸ್ಯ ಶರೀಫ್ ಮಿಲನ್ ರವರು ಮೂಡಬಿದಿರೆ ಎಸ್ ಕೆ ಎಸ್ ಎಸ್ ಎಫ್ ವಲಯದ ವಿಖಾಯ ತಂಡದ ನೆರವನ್ನು ಕೋರಿದರು. ತಕ್ಷಣವೇ ಅದಕ್ಕೆ ಸ್ಪಂದಿಸಿದ ಎಸ್ ಕೆ ಎಸ್ ಎಸ್ ಎಫ್ ಮೂಡುಬಿದಿರೆ ವಲಯದ ಪದಾಧಿಕಾರಿಗಳು ಜಿಲ್ಲಾ ಉಸ್ತುವಾರಿ ಇಸ್ಹಾಕ್ ಹಾಜಿ […]