ಶ್ರಮಿಕ ಕಛೇರಿಗೆ ಬಿಜೆಪಿ ಪ್ರಮುಖರ ಭೇಟಿ

ಬೆಳ್ತಂಗಡಿ: ಮಂಗಳೂರಿನಲ್ಲಿ ನಡೆದ ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸಭೆಗೆ ಬಂದಿದ್ದ ರಾಜ್ಯ ಬಿಜೆಪಿ ಕಾರ್ಯದರ್ಶಿ ಜಿ. ರವಿ ಕುಮಾರ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ವಿನಯ್ ಬಿದಿರೆ ಹಾಗೂ ಮೈಸೂರಿನ ರಾಜೇಂದ್ರ ನವೆಂಬರ್ 6ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಲು ಆಗಮಿಸಿದ್ದು, ಈ ಸಂದರ್ಭದಲ್ಲಿ ದಾರಿ ಮಧ್ಯೆ ಬೆಳ್ತಂಗಡಿಯಲ್ಲಿರುವ ಶಾಸಕ ಹರೀಶ್ ಪೂಂಜಾರ ಕಛೇರಿ ‘ಶ್ರಮಿಕ’ ಕ್ಕೆ ಭೇಟಿ ನೀಡಿದರು.ಪಕ್ಷದ ಪ್ರಮುಖರನ್ನು ತನ್ನ ಕಛೇರಿಗೆ ಆತ್ಮೀಯವಾಗಿ ಬರಮಾಡಿಕೊಂಡ ಶಾಸಕ ಹರೀಶ್ ಪೂಂಜಾ; ಆದರದಿಂದ ಗೌರವಿಸಿ, ಪ್ರೀತಿಯಿಂದ ಬೀಳ್ಕೊಟ್ಟರು. […]
ನಿವೃತ್ತ ಸಿ.ಇ.ಓ. ದ್ವಯರಿಗೆ ಅಭಿನಂದನೆ

ಬೆಳ್ತಂಗಡಿ: ಸಹಕಾರಿ ಸಂಸ್ಥೆಗಳು ಇಂದಿಗೂ ಜನರ ವಿಶ್ವಾಸವನ್ನು ಉಳಿಸಿಕೊಂಡು ಪ್ರಾಮಾಣಿಕ ಸೇವೆಯನ್ನು ನೀಡುತ್ತಿದೆ ಎಂದಾದರೆ ಅದಕ್ಕೆ ಪ್ರಮುಖ ಕಾರಣ ಸಹಕಾರಿ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳು. ಇಂದು ಭ್ರಷ್ಟಾಚಾರವಿಲ್ಲದ ಆರ್ಥಿಕ ವ್ಯವಹಾರ ಸಹಕಾರಿ ಸಂಸ್ಥೆಗಳಲ್ಲಿ ನಡೆಯುತ್ತಿದೆ. ಪ್ರಾಮಾಣಿಕತೆಯೊಂದಿಗೆ ಕಾನೂನಿನ ಚೌಕಟ್ಟಿನಲ್ಲಿ ಕರ್ತವ್ಯ ನಿರ್ವಹಿಸಿ, ನೆಮ್ಮದಿಯ ಬದುಕು ಕಟ್ಟಿಕೊಂಡವರು ಸಹಕಾರಿ ಸಂಸ್ಥೆಗಳ ಸಿಬ್ಬಂದಿಗಳು ಎಂದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ನಿರ್ದೇಶಕ ನಿರಂಜನ ಬಾವಂತಬೆಟ್ಟು ಹೇಳಿದರು.ಅವರು ನವೆಂಬರ್ 5ರಂದು ಬೆಳ್ತಂಗಡಿಯ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ […]
ದೇಗುಲದ ಜೀರ್ಣೋದ್ಧಾರಕ್ಕೆ ದೇಣಿಗೆ

ವೇಣೂರು: ಐತಿಹಾಸಿಕ ಕ್ಷೇತ್ರವಾದ ವೇಣೂರಿನ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಊರ ಪರವೂರ ಭಕ್ತರ-ದಾನಿಗಳ ಸಹಕಾರದಿಂದ ದೇಗುಲದ ಜೀರ್ಣೋದ್ಧಾರ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು; ನವೆಂವರ್ 4ರಂದು ತನ್ನ ತಾಯಿ ಚಂದ್ರಾವತಿಯವರೊಂದಿಗೆ ದೇಗುಲಕ್ಕೆ ಭೇಟಿ ನೀಡಿದ ಆರಂಬೋಡಿ ಗ್ರಾಮದ ಪ್ರಗತಿಪರ ಕೃಷಿಕರಾದ ಕಾಮದೇನು ನಿಲಯ ಮಂಜಿಲ ವಸಂತ ಪೂಜಾರಿಯವರು ದೇಗುಲದ ಜೀರ್ಣೋದ್ಧಾರ ಕಾಮಗಾರಿಗೆ ತಾನು ಕೊಡಲು ನಿಶ್ಚಯಿಸಿದ 1ಲಕ್ಷ ರೂಪಾಯಿ ದೇಣಿಗೆಯಲ್ಲಿ ಕೊನೆಯ ಕಂತಿನ ಮೊತ್ತ ರೂಪಾಯಿ 25,000/-ವನ್ನು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಜಿಲ್ಲಾ ಪಂಚಾಯತ್ ಸದಸ್ಯ ಧರಣೇಂದ್ರ ಕುಮಾರ್ರಿಗೆ […]
ಮಗುವಿಗೆ ವಿಷವಿಕ್ಕಿ ದಂಪತಿ ಸಾವಿಗೆ ಯತ್ನ
ಬೆಳ್ತಂಗಡಿ: ತಮ್ಮ ಕರುಳಕುಡಿಗೆ ವಿಷವಿಕ್ಕಿದ ದಂಪತಿಗಳು ತಾವೂ ವಿಷ ಸೇವಿಸಿ ಸಾವಿಗೆ ಶರಣಾಗಲು ಯತ್ನಿಸಿದ ದುರ್ಘಟನೆ ನವೆಂಬರ್ 3ರಂದು ಕೊಕ್ರಾಡಿಯಿಂದ ವರದಿಯಾಗಿದ್ದು; ದುರ್ಘಟನೆಯಲ್ಲಿ ಅಮಾಯಕ ಮಗು ಕಿಶಾ(5)ಹಾಗೂ ಮಗುವಿನ ತಂದೆ ಚೇತನ್ ಕುಮಾರ್ (32) ಸಾವಿಗೀಡಾಗಿದ್ದು; ಮಗುವಿನ ತಾಯಿ ಆಶಾಲತಾ (27) ಜೀವನ್ಮರಣ ಹೋರಾಟ ನಡೆಸುತ್ತಿದ್ದು, ಸಧ್ಯಕ್ಕೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಘಟನೆಯ ವಿವರ: ಬೆಳ್ತಂಗಡಿ ತಾಲೂಕಿನ ಕೊಕ್ರಾಡಿ ಗ್ರಾಮದ ಹೆಡ್ಲಬೆಟ್ಟು ನಿವಾಸಿ ಚೇತನ್ ಕುಮಾರ್ ನವೆಂಬರ್ 2ರ ಸಂಜೆ ತಂಪು ಪಾನೀಯಕ್ಕೆ ವಿಷಯುಕ್ತ […]
ಕೃಷಿ ಇಲಾಖೆಯಿಂದ ಟ್ರಾಕ್ಟರ್ ವಿತರಣೆ

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಕೃಷಿ ಇಲಾಖೆ ಬೆಳ್ತಂಗಡಿಯ ವತಿಯಿಂದ ನವೆಂಬರ್ 4ರಂದು ಕಛೇರಿಯ ವಠಾರದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಶಾಸಕ ಹರೀಶ್ ಪೂಂಜಾರವರು ಆಯ್ಕೆಯಾದ ಅರ್ಹ ಕೃಷಿಕ ಫಲಾನುಭವಿಗಳಿಗೆ ಟ್ರಾಕ್ಟರ್ ಹಸ್ತಾಂತರಿಸಿದರು.ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಪ್ರತಾಪ್ಸಿಂಹ ನಾಯಕ್, ಬೆಳ್ತಂಗಡಿ ತಾಲೂಕು ಪಂಚಾಯತ್ ಅಧ್ಯಕ್ಷೆ ದಿವ್ಯಜ್ಯೋತಿ, ಉಪಾಧ್ಯಕ್ಷೆ ವೇದಾವತಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ನ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿಯ ಅಧ್ಯಕ್ಷೆ ಮಮತಾ ಎಂ. ಶೆಟ್ಟಿ, ಸದಸ್ಯರಾದ ಕೊರಗಪ್ಪ ನಾಯ್ಕ ಹಾಗೂ […]
ಕಾಂಗ್ರೇಸ್ ಐಕ್ಯತಾ ಸಮಾವೇಶ

ಬೆಳ್ತಂಗಡಿ: ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಪಕ್ಷ ಗ್ರಾಮೀಣ ಬ್ಲಾಕ್ ಸಮಿತಿ ಬೆಳ್ತಂಗಡಿ ಹಾಗೂ ಗ್ರಾಮ ಸಮಿತಿ ನೆರಿಯ ಇದರ ಜಂಟಿ ಆಶ್ರಯದಲ್ಲಿ ನೆರಿಯ ಗ್ರಾಮ ಪಂಚಾಯತ್ ಮಟ್ಟದ ಗ್ರಾಮ ಸಮಿತಿ ಮತ್ತು ಬೂತ್ ಸಮಿತಿಯ ಪದಾಧಿಕಾರಿಗಳ ಐಕ್ಯತಾ ಸಮಾವೇಶವು ನೆರಿಯ ಗ್ರಾಮದ ಬಯಲು ಅಂಕೋತ್ಯಾರು ಇಸುಬು ರವರ ಮನೆ ವಠಾರದಲ್ಲಿ ನಡೆಯಿತು.ಬೆಳ್ತಂಗಡಿ ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಂಜನ್ ಜಿ. ಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕರ್ನಾಟಕ ರಾಜ್ಯ ಸರಕಾರದ ಮಾಜಿ ಸಚಿವ ಕೆ. ಗಂಗಾಧರ ಗೌಡ […]
ತೋಟಗಾರಿಕಾ ಕಛೇರಿ ಕಟ್ಟಡ ಉದ್ಘಾಟನೆ

ಬೆಳ್ತಂಗಡಿ: ಬೆಳ್ತಂಗಡಿ ತೋಟಗಾರಿಕಾ ಇಲಾಖಾ ಕಛೇರಿಯ ನೂತನ ಕಟ್ಟಡವನ್ನು ನವೆಂಬರ್ 4ರಂದು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಉದ್ಘಾಟಿಸಿದರು. ವಿಧಾನ ಪರಿಷತ್ ಸದಸ್ಯ ಪ್ರತಾಪ್ಸಿಂಹ ನಾಯಕ್, ಬೆಳ್ತಂಗಡಿ ತಾಲೂಕು ಪಂಚಾಯತ್ ಅಧ್ಯಕ್ಷೆ ದಿವ್ಯಜ್ಯೋತಿ, ಉಪಾಧ್ಯಕ್ಷೆ ವೇದಾವತಿ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಮಮತಾ ಎಂ. ಶೆಟ್ಟಿ, ಸದಸ್ಯರಾದ ಕೊರಗಪ್ಪ ನಾಯ್ಕ ಹಾಗೂ ಸೌಮ್ಯಲತಾ ಜಯಂತ್ ಗೌಡ, ತಾಲೂಕು ಪಂಚಾಯತ್ ಸಾಮಾಜಿಕ ನ್ಯಾಯ ಸಮಿತಿಯ ಅಧ್ಯಕ್ಷ ಶಶಿಧರ ಕಲ್ಮಂಜ, ಸದಸ್ಯರಾದ […]
ಇವರಿಗೆ ಪ್ರಧಾನಿ ಮೋದಿ ಆದರ್ಶನಾ…? ಮಾಸ್ಕ್ ಧರಿಸದೇ ಇನ್ನೊಂದು ಹೈಮಾಸ್ಕ್ ದೀಪ ಉದ್ಘಾಟನೆ

ಬೆಳ್ತಂಗಡಿ: ತಣ್ಣೀರುಪಂತ ಗ್ರಾಮ ಪಂಚಾಯತ್ ವ್ಯಾಪ್ತಿಯ ಕರಾಯ ಗ್ರಾಮದ ಶ್ರೀ ಕೃಷ್ಣ ಭಜನಾ ಮಂದಿರದ ಆವರಣದಲ್ಲಿ ಅಳವಡಿಸಲಾದ ಹೈಮಾಸ್ಕ್ ದೀಪವನ್ನು ನವೆಂಬರ್ 3ರಂದು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಉದ್ಘಾಟಿಸಿದರು. ಕಳೆದ ವಾರ ಸುಲ್ಕೇರಿಮೊಗ್ರು ದೈವಸ್ಥಾನದಲ್ಲಿ ನಡೆದಂತೆ ಇಲ್ಲೂ ಕೂಡಾ ಮಾಸ್ಕ್ ಧರಿಸದೇ ಬಹುತೇಕರು ಹೈಮಾಸ್ಕ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ, ಕೊರೋನಾ ಸೋಂಕಿಗೆ ಸವಾಲು ಹಾಕಿದರು.ಬಹಳ ವಿಶೇಷವೆಂದರೆ ಹೇಳಿಕೇಳಿ ಈ ಕಾರ್ಯಕ್ರಮಗಳಲ್ಲಿ ಉದ್ಘಾಟಕರಾಗಿ ಭಾಗವಹಿಸಿದ ಶಾಸಕ ಹರೀಶ್ ಪೂಂಜಾರ ಸಹಿತ ಬಹುತೇಕರು ರಾಷ್ಟ್ರದ ಪ್ರಧಾನಿ ನರೇಂದ್ರ ಮೋದಿಯವರ […]
ಜಾಗೃತ ಸಮಾಜದಿಂದ ಭ್ರಷ್ಟಾಚಾರಕ್ಕೆ ಕಡಿವಾಣ.ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮದಲ್ಲಿ ನ್ಯಾl ನಾಗೇಶ್ ಮೂರ್ತಿ

ಬೆಳ್ತಂಗಡಿ: ಭ್ರಷ್ಟಾಚಾರಕ್ಕೆ ಅದರದ್ಧೇ ಆದ ಕರಾಳ ಇತಿಹಾಸವಿದೆ. ರಾಷ್ಟ್ರದ ಅಭಿವೃದ್ಧಿಗೆ ಭ್ರಷ್ಟಾಚಾರಕ್ಕೆಕಡಿವಾಣ ಹಾಕಬೇಕಾದ್ದು ತೀರಾ ಅಗತ್ಯ. ಅದಕ್ಕಾಗಿ ಸಮಾಜವನ್ನು ಜಾಗೃತಗೊಳಿಸಬೇಕಾಗಿದೆ. ಜಾಗೃತ ಸಮಾಜದಿಂದ ಮಾತ್ರ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಲು ಸಾಧ್ಯ ಎಂದು ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ಬಿ. ಕೆ. ನಾಗೇಶ್ ಮೂರ್ತಿ ಹೇಳಿದರು.ಅವರು ನವೆಂಬರ್ 2ರಂದು ಬೆಳ್ತಂಗಡಿಯ ಶ್ರೀ ಮಂಜುನಾಥೇಶ್ವರ ಕಲಾಭವನದಲ್ಲಿ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಬೆಂಗಳೂರು, ದಕ್ಷಿಣ ಕನ್ನಡ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, […]
ಕಾರ್ಮಿಕರಿಗೆ ಸೌಲಭ್ಯಗಳ ಮಾಹಿತಿ ಕಾರ್ಯಾಗಾರ

ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ, ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ಇದರ ಜಂಟಿ ಅಶ್ರಯದಲ್ಲಿನೊಂದಣಿಯಾದ ಕಟ್ಟಡ ಕಾರ್ಮಿಕರ ಗುರುತಿನ ಚೀಟಿ ವಿತರಣೆ ಕಾರ್ಯಕ್ರಮಹಾಗೂ ಕಾರ್ಮಿಕರ ಸೌಲಭ್ಯಗಳ ಮಾಹಿತಿ ಕಾರ್ಯಾಗಾರವು ನವೆಂಬರ್ 1ರಂದು ಮರೋಡಿ ಗ್ರಾಮಪಂಚಾಯತ್ ಸಭಾ ಭವನ ದಲ್ಲಿ ನಡೆಯಿತು.ಭಾರತೀಯ ಮಜ್ದೂರ್ ಸಂಘದ ಮರೀಡಿ ಗ್ರಾಮ ಸಮಿತಿ ಅಧ್ಯಕ್ಷ ಗಣೇಶ್ ಕರ್ಕೇರ ಇವರ ನೇತ್ರತ್ವದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಸಂಘದ ತಾಲೂಕು ಸಮಿತಿ ಅಧ್ಯಕ್ಷರಾದ ಉದಯ […]