ಇಂದಿನಿಂದ ಧರ್ಮಸ್ಥಳದಲ್ಲಿ ದೇವರ ದರ್ಶನಕ್ಕೆ ಮುಕ್ತ ಅವಕಾಶ:
ಸರಕಾರದ ಮಾರ್ಗ ಸೂಚಿಯಂತೆ ಹಾಗೂ ಕೊರೊನಾ ವೈರಸ್ ನಿಯಂತ್ರಿಸಲು ಮುಂಜಾಗರೂಕತೆಯನ್ನು ಅನುಸರಿಸಿ ಇಂದಿನಿಂದ ನಾಡಿನ ಪವಿತ್ರ ಕ್ಷೇತ್ರವಾದ ಶ್ರೀ ಕ್ಷೇತ್ರ ದರ್ಮಸ್ಥಳದಲ್ಲಿ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ಕ್ಷೇತ್ರದ ಪ್ರಕಟನೆ ತಿಳಿಸಿದೆ. ದೇವರ ದರ್ಶನ ಸಂದರ್ಭದಲ್ಲಿ ಮಾಸ್ಕ್, ಸ್ಯಾನಿಟೈಸರ್, ಸಾಮಾಜಿಕ ಅಂತರ ಕಾಪಾಡುವುದು ಕಡ್ಡಾಯವಾಗಿದೆ. ದೇವಸ್ಥಾನ ಅರ್ಚಕರು, ರಕ್ಷಣಾ ಸಿಬ್ಬಂದಿಗಳು ಹಾಗೂ ನೌಕರರು ನೀಡುವ ಸಲಹೆ ಸೂಚನೆಗಳನ್ನು ಗಮನಿಸಿ ಭಕ್ತರು ಸಹಕರಿಸಬೇಕು ಎಂದು ಕೋರಲಾಗಿದೆ. ಡಾ ಹೆಗ್ಗಡೆಯವರ ಬೇಟಿ ಸಮಯ. ಭಕ್ತರು ದರ್ಮಾಧಿಕಾರಿಗಳನ್ನು ಬೆಳಿಗ್ಗೆ […]
ಬೆಳ್ತಂಗಡಿ ಧರ್ಮಪ್ರಾಂತ್ಯದ ಬಿಷಪ್ ಹೋಂ ಕ್ವಾರಂಟೈನಿಗೆ
ಕಳೆದ ಫೆಬ್ರವರಿ ತಿಂಗಳ ಅಂತ್ಯದಲ್ಲಿ ಇಟಲಿ ಹಾಗೂ ಜರ್ಮನಿ ಪ್ರವಾಸ ಕೈಗೊಂಡಿದ್ದ ಬೆಳ್ತಂಗಡಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಅತಿವಂದನೀಯ ಲಾರೆನ್ಸ್ ಮುಕ್ಕುಯಿ, ನಂತರ ಕೊರೋನಾ ಸೋಂಕು ತಡೆಗೆ ಮುಂಜಾಗ್ರತೆಗಾಗಿ ಭಾರತ ಸರಕಾರ ದೇಶದಲ್ಲಿ ಲಾಕ್ ಡೌನಿಗೆ ಕರೆ ನೀಡುವುದರ ಜೊತೆಗೆ ಅಂತರಾಷ್ಟ್ರೀಯ ವಿಮಾನಗಳ ಪ್ರವೇಶಕ್ಕೆ ನಿರ್ಬಂಧ ಹೇರಿದ್ದರಿಂದ ಜರ್ಮನಿಯಲ್ಲಿಯೇ ವಾಸ್ತವ್ಯ ಮುಂದುವರಿಸಬೇಕಾದ ಅನಿವಾರ್ಯತೆಗೆ ಸಿಲುಕಿದರು. ಇದೀಗ ದೇಶದಲ್ಲಿ ಲಾಕ್ ಡೌನ್ ನಿಯಮ ಸಡಿಲಗೊಂಡು, ಅಂತರಾಷ್ಟ್ರೀಯ ವಿಮಾನಗಳ ಹಾರಾಟಕ್ಕೂ ಕೇಂದ್ರ ಸರಕಾರ ಹಸಿರು ನಿಶಾನೆ ತೋರಿದ್ದರಿಂದ; ಇದುವರೆಗೆ ಜರ್ಮನಿಯಲ್ಲಿದ್ದ ಬಿಷಪ್ […]
ಬೆಳ್ತಂಗಡಿ ನ್ಯಾಯಾಲಯದಲ್ಲಿ ವಿಶ್ವ ಪರಿಸರ ದಿನಾಚರಣೆ
ಕೊರೋನಾ ಸೋಂಕಿನ ವಿರುದ್ಧ ಮುಂಜಾಗ್ರತೆಯ ಸಂದೇಶ ಸಾರಿದ ಕಾರ್ಯಕ್ರಮ ಬೆಳ್ತಂಗಡಿ: ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮಂಗಳೂರು, ತಾಲೂಕು ಕಾನೂನು ಸೇವೆಗಳ ಸಮಿತಿ ಬೆಳ್ತಂಗಡಿ, ವಕೀಲರ ಸಂಘ ಬೆಳ್ತಂಗಡಿ ಇವರ ಸಂಯುಕ್ತ ಆಶ್ರಯದಲ್ಲಿ ವಲಯ ಅರಣ್ಯಾಧಿಕಾರಿಗಳ ಕಛೇರಿ ಬೆಳ್ತಂಗಡಿ ಇವರ ಸಹಕಾರದಲ್ಲಿ ಜೂನ್ 5ರಂದು ಬೆಳ್ತಂಗಡಿ ನ್ಯಾಯಾಲಯದ ಆವರಣದಲ್ಲಿ ನಡೆದ ವಿಶ್ವ ಪರಿಸರ ದಿನಾಚರಣೆಯನ್ನು ಬೆಳ್ತಂಗಡಿ ತಾಲೂಕು ಕಾನೂನು ಸೇವೆಗಳ ಸಮಿತಿಯ ಅಧ್ಯಕ್ಷರಾದ ಹಿರಿಯ ಸಿವಿಲ್ ನ್ಯಾಯಾಧೀಶ ನಾಗೇಶ್ ಮೂರ್ತಿ ನ್ಯಾಯಾಲಯದ ಆವರಣದಲ್ಲಿ ಗಿಡ ನೆಡುವ ಮೂಲಕ […]
ನಾರಾವಿ ಜನಸೇವಾ ಟ್ರಸ್ಟ್ ಸದಸ್ಯರಿಂದ ರಕ್ತದಾನ
ಕೊರೊನಾ ಮಹಾಮಾರಿಯಿಂದಾಗಿ ಕೆಎಂಸಿ ಆಸ್ಪತ್ರೆ ಮಣಿಪಾಲದ ರಕ್ತ ಕೇಂದ್ರದಲ್ಲಿ ರಕ್ತ ಸಂಗ್ರಹಣೆಯಲ್ಲಿ ಕೊರತೆ ಕಂಡು ಬಂದ ಕಾರಣ ಮೇ 31ರಂದು ಭಾನುವಾರದಂದು ಮಣಿಪಾಲ ಕೆಎಂಸಿ ಆಸ್ಪತ್ರೆಯ ರಕ್ತಕೇಂದ್ರದಲ್ಲಿ ಜನಸೇವಾ ಟ್ರಸ್ಟಿನ ಮಾರ್ಗದರ್ಶಕರಾದ ಡಾ.ಪ್ರಸಾದ್ ಬಿ ಶೆಟ್ಟಿ ನಾರಾವಿ ಇವರ ಸಹಕಾರದಲ್ಲಿ ಟ್ರಸ್ಟ್ ನ ವತಿಯಿಂದ ನಡೆದ ರಕ್ತದಾನ ಶಿಬಿರದಲ್ಲಿ 25 ಮಂದಿ ರಕ್ತದಾನಿಗಳು ರಕ್ತದಾನ ಮಹಾದಾನ ಎನ್ನುವ ಧ್ಯೇಯದೊಂದಿಗೆ ಸ್ವ ಇಚ್ಛೆಯಿಂದ ಆಗಮಿಸಿ ನಮ್ಮೊಂದಿಗೆ ರಕ್ತದಾನವನ್ನು ಮಾಡಿ ಮತ್ತೊಂದು ಜೀವಕ್ಕೆ ಉಸಿರಾಗಲು ಕಾರಣೀಕರ್ತ ರಾದರು. ಈ ಸಂದರ್ಭದಲ್ಲಿ […]
ಚಾರ್ಮಾಡಿ ಗೇಟ್: ಮುಕ್ತ ಸಂಚಾರ
ಜಿಲ್ಲೆಗೆ ಮುಕ್ತ ಕೊರೋನಾ ಸೋಂಕಿನ ಭೀತಿ ಬಂಟ್ವಾಳ-ಮೂಡಿಗೆರೆ ರಾಜ್ಯ ಹೆದ್ದಾರಿಯ ಚಾರ್ಮಾಡಿಯಲ್ಲಿ ಕೋವಿಡ್19 ಮುನ್ನೆಚ್ಚರಿಕೆ ಕ್ರಮವಾಗಿ ವಾಹನ ತಪಾಸಣೆಗೆ ಹಾಗೂ ಪ್ರಯಾಣಿಕರ ಆರೋಗ್ಯವನ್ನು ಪರೀಕ್ಷಿಸಲು ಈ ಹಿಂದೆ ತೆರೆಯಲಾಗಿದ್ದ ತಾತ್ಕಾಲಿಕ ಗೇಟನ್ನು ತೆರವುಗೊಳಿಸಿದ್ದು, ಮುಕ್ತ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಹೊರ ಜಿಲ್ಲೆಗಳಿಂದ ಬರುವವರ ಆರೋಗ್ಯ ತಪಾಸಣೆ ಇಲ್ಲದಿರುವುದರಿಂದ ಜಿಲ್ಲೆಗೆ ನಮ್ಮ ಬೆಳ್ತಂಗಡಿ ತಾಲೂಕಿನ ಮೂಲಕ ಕೊರೋನಾ ಸೋಂಕು ಮುಕ್ತವಾಗಿ ಪ್ರವೇಶ ಪಡೆಯುವ ಅಪಾಯವಿದೆ. ಈಗ ಹೊರ ರಾಜ್ಯದ ವಾಹನಗಳ ಹಾಗೂ ಪ್ರಯಾಣಿಕರ ದಾಖಲೆಗಳನ್ನು ಮಾತ್ರ ತಪಾಸಣೆ ಮಾಡಲಾಗುತ್ತಿದೆ. […]
ಇನ್ನು ಬೆಳ್ತಂಗಡಿ ವಾರದ ಸಂತೆ ಖಾಯಂ ಆಗಿ ಎ.ಪಿ.ಎಂ.ಸಿ. ವಾರ್ಡಿನಲ್ಲೇ
ಶಾಸಕ ಹರೀಶ್ ಪೂಂಜಾ ನೇತೃತ್ವದ ಸಭೆಯಲ್ಲಿ ಮಹತ್ವದ ತೀರ್ಮಾನ ಕೊರೋನಾ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮವಾಗಿ ವೈಯಕ್ತಿಕ ಅಂತರ ಕಾಪಾಡುವ ಉದ್ಧೇಶದಿಂದ ಪ್ರತೀ ಸೋಮವಾರ ನಡೆಯುವ ಬೆಳ್ತಂಗಡಿಯ ವಾರದ ಸಂತೆಯನ್ನು ಶಾಸಕ ಹರೀಶ್ ಪೂಂಜಾರ ಸೂಚನೆಯಂತೆ ಬೆಳ್ತಂಗಡಿ ಪಟ್ಟಣ ಪಂಚಾಯತ್ ವ್ಯಾಪ್ತಿಯಲ್ಲಿರುವ ಹಳೆಕೋಟೆಯ ಎ.ಪಿ.ಎಂ.ಸಿ. ಯಾರ್ಡಿಗೆ ತಾತ್ಕಾಲಿಕವಾಗಿ ಈ ಹಿಂದೆ ಸ್ಥಳಾಂತರಿಸಲಾಗಿತ್ತು. ಇದೀಗ ಜೂನ್ 1ರಂದು ಬೆಳ್ತಂಗಡಿಯ ಎ.ಪಿ.ಎಂ.ಸಿ.ಯ ಸಭಾಂಗಣದಲ್ಲಿ ಶಾಸಕ ಹರೀಶ್ ಪೂಂಜಾರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಬೆಳ್ತಂಗಡಿಯ ವಾರದ ಸಂತೆಯನ್ನು ಖಾಯಂ ಆಗಿ ಎ.ಪಿ.ಎಂ.ಸಿ. […]
ಬೆಳ್ತಂಗಡಿ ತಾಲೂಕು ಕಲ್ಲೇರಿ ಗ್ರಾಮದ ಮಹಿಳೆಗೆ ಕೊರೋನಾ ದೃಢ

ಆಡಳಿತಕ್ಕೆ ಸವಾಲಾದ ಸೋಂಕಿನ ಮೂಲ ಪತ್ತೆಕಾರ್ಯ ಬೆಳ್ತಂಗಡಿ ತಾಲೂಕಿನ ತಣ್ಣೀರುಪಂತ ಗ್ರಾಮದ ಕಲ್ಲೇರಿ ಜನತಾ ಕಾಲೊನಿಯ 45ರ ವಯೋಮಾನದ ಅಸ್ತಮಾದಿಂದ ಸುದೀರ್ಘ ಕಾಲದಿಂದ ಬಳಲುತ್ತಿದ್ದ ಮಹಿಳೆಯೋರ್ವಳಿಗೆ ಗಂಟಲುದ್ರವ ಪರೀಕ್ಷೆಯಲ್ಲಿ ಕೊರೋನಾ ಸೋಂಕು ‘ಪಾಸಿಟೀವ್’ ವರದಿ ಜೂನ್ 1ರಂದು ಬಂದಿದ್ದು, ಯಾವುದೇ ಟ್ರಾವೆಲ್ ಹಿಸ್ಟರಿ ಇಲ್ಲದ ಈ ಮಹಿಳೆಗೆ ಕೊರೋನಾ ವೈರಸ್ ಎಲ್ಲಿಂದ ಬಂತು ಎಂಬ ಸವಾಲನ್ನು ಭೇದಿಸಲೇ ಬೇಕಾದ ಸವಾಲು ತಾಲೂಕು ಆಡಳಿತದ ಮುಂದಿದೆ.ಕಳೆದ ಎರಡು ತಿಂಗಳ ಹಿಂದೆ ಇದೇ ಪರಿಸರದ ಯುವಕನೋರ್ವನಿಗೆ ಕೊರೋನಾ ಪೊಸಿಟಿವ್ ಗೋಚರಿಸಿದ್ದು, […]
ಕೊರೋನಾ ಸೋಂಕಿನ ಬಗ್ಗೆ ಎಚ್ಚರ ಮರೆತ ಮಂದಿ
ವೈಯಕ್ತಿಕ ಅಂತರ ಮರೆತು ಮೆರೆದರಿವರು ಧರ್ಮಸ್ಥಳದ ಕೆಲ ಮಂದಿ ಅದಾಗಲೇ ಕೊರೋನಾ ಸೋಂಕು ಹರಡದಂತೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳನ್ನು ಮರೆತಂತಿದೆ. ಈಗಲೇ ಹೀಗಾದರೆ ಮುಂದೆ ಕ್ಷೇತ್ರದ ದೇಗುಲದ ಬಾಗಿಲು ತೆರೆದ ಮೇಲೆ ಭಕ್ತಸಾಗರ ಬಂದಾಗ ನಮ್ಮೂರ ಕಥೆ ಏನಾಗಬಹುದು ಎಂಬ ಆತಂಕ ಕೊರೋನಾ ಸೋಂಕು ಹರಡದಂತೆ ಸುರಕ್ಷತಾ ಕ್ರಮ ಪಾಲಿಸುತ್ತಿರುವ ಕ್ಷೇತ್ರದ ನಿವಾಸಿಗರಲ್ಲಿ ಆವರಿಸತೊಡಗಿದೆ.ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಕೊರೋನಾ ಸೋಂಕು ಹರಡದಂತೆ ಸುರಕ್ಷತಾ ಕ್ರಮಗಳನ್ನು ಪಾಲಿಸುತ್ತಿರುವ ನಾಗರಿಕರಲ್ಲಿ ಈ ಆತಂಕ ಸೃಷ್ಟಿಯಾಗಲು ಕಾರಣ ಜೂನ್ 1ರಂದು ಧರ್ಮಸ್ಥಳದ […]
ಬೆಳ್ತಂಗಡಿ ತಾಲೂಕಿನಲ್ಲಿ ಮಿಡತೆಗಳ ಹಿಂಡು ಪ್ರತ್ಯಕ್ಷ
ಬೆಳ್ತಂಗಡಿ:ತಾಲೂಕಿನ ಕರಂಬಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಪಾದೆ ಅನೀಶ್ ಎಂಬವರ ತೋಟದಲ್ಲಿ ಮೇ 30ರ ಮಧ್ಯಾಹ್ನ ಮಿಡತೆಗಳ ಗುಂಪು ಕಂಡುಬಂದಿದೆ.ಅನೀಶ್ ಅವರು ತನ್ನ ರಬ್ಬರ್ ತೊಟದಲ್ಲಿ ಹೋಗಿ ನೋಡಿದಾಗ ಮಿಡತೆಗಳು ರಬ್ಬರ್ ಗಿಡಗಳ ಕೆಳಗೆ ಇರುವ ಗಿಡ ಬಳ್ಳಿಗಳ ಸೊಪ್ಪುಗಳನ್ನು ತಿನ್ನುವುದು ಕಂಡುಬಂದಿದೆ. ಈಗಾಗಲೇ ಎಲ್ಲಾ ಕಡೆಯಲ್ಲೂ ಮಿಡತೆಗಳ ಹಾವಳಿಯಿಂದ ತತ್ತರಿಸುತ್ತಿರುವಾಗ ತಾಲೂಕಿನಲ್ಲಿಯೂ ಮಿಡತೆಗಳು ಕಂಡು ಬಂದದ್ದು ಕೃಷಿಕರು ಚಿಂತೆಗೀಡಾಗುವಂತೆ ಮಾಡಿದೆ.
ಬಿಗ್ ಬ್ರೇಕಿಂಗ್ & ಶಾಕಿಂಗ್ ನ್ಯೂಸ್

ಮೂಡುಬಿದಿರೆಯಲ್ಲಿ 7 ಕೊರೋನಾ ಪಾಸಿಟಿವ್ ಮೂಡುಬಿದಿರೆ: ಮೇ 29, ಮೂಡುಬಿದಿರೆಯ ಪಾಲಿಗೆ ಕರಾಳ ದಿನ ಎಂದರೂ ತಪ್ಪಾಗಲಾರದು. ಮೂಡುಬಿದಿರೆಯಲ್ಲೂ ಕೊರೋನಾ ಪಾಸಿಟಿವ್ ಅಭಿಯಾನಕ್ಕೆ ಚಾಲನೆ ಸಿಕ್ಕಂತಾಗಿದೆ. ಕಡಂದಲೆ ಶಾಲೆಯಲ್ಲಿ ಕ್ವಾರಂಟೈನ್ ಗೆ ಒಳಗಾದ ದಿನವೇ ಆತ್ಮಹತ್ಯೆಗೆ ಶರಣಾಗಿದ್ದ ಕೊರೋನಾ ಪಾಸಿಟಿವ್ ವ್ಯಕ್ತಿಯ ಜೊತೆಗೆ ಮುಂಬೈಯಿಂದ ಆಗಮಿಸಿದ್ದ ಇತರ ಎಲ್ಲಾ 6 ಮಂದಿಯ ಸ್ಲ್ಯಾಬ್ ರಿಪೋರ್ಟಲ್ಲಿ ಕೊರೋನಾ ಪಾಸಿಟಿವ್ ದೃಢವಾಗಿದೆ ಎಂದು ಗೊತ್ತಾಗಿದೆ. ಇದೀಗ ಕಡಂದಲೆ ಕ್ವಾರಂಟೈನ್ ಸೆಂಟರಿನಲ್ಲಿ ಕೊರೋನಾ ಸೋಂಕಿತ ಸಾವಿಗೆ ಶರಣಾದ ವೇಳೆ ಪೊಲೀಸರು ಬರುವ […]