ದ್ವಿತೀಯ ಪಿಯುಸಿ ಮರು ಪರೀಕ್ಷೆ ಫಲಿತಾಂಶ ಪ್ರಕಟಎಕ್ಸೆಲ್ ವಿದ್ಯಾರ್ಥಿ ಯಾನ ಪೊನ್ನಮ್ಮ ರಾಜ್ಯಕ್ಕೇ ಪ್ರಥಮ

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಯಾನ ಪೊನ್ನಮ್ಮ ವಾಣಿಜ್ಯ ವಿಭಾಗದಲ್ಲಿ 600 ಅಂಕಗಳಿಗೆ 600 ಅಂಕಗಳನ್ನು ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನಿಯಾಗಿದ್ದಾರೆ. ವಿಜ್ಞಾನ ವಿಭಾಗದಲ್ಲಿ 597 ಅಂಕಗಳನ್ನು ಪಡೆದ ಅಕ್ಷಯ್ ಎ. ರಾಜ್ಯಕ್ಕೆ ತೃತೀಯ ಸ್ಥಾನಿಯಾಗಿದ್ದಾರೆ.ವಿಜ್ಞಾನ ವಿಭಾಗದಲ್ಲಿರೋಹಿತ್ ಮಹಾಂತೇಶ್ ಹಳೇ ಗೌಡರ್ 596,ಶಿಲ್ಪಿತ ಎಚ್.ಎಸ್. 596, ಫಾತಿಮ ರಾಯಿಸ 596,ಭೂಮಿಕ 594,ಕೌಶಲ್ ಎಲ್. ಕುಲಾಲ್ 594,ಮೋನಿಕಾ ಎಚ್. 593,ಪರಿಷ್ ಪಿ. ಗೋಂಕರ್ 593,ರಿಹಾ ಪರ್ವಿನ್ 593,ಮೊಹಮ್ಮದ್ ಜಿಯಾದ್ 593,ಅನ್ವಿಷಾ ಜಿ. ಭಟ್ […]
ಸಚಿವ ಎನ್. ಎಸ್. ಭೋಸರಾಜು ಧರ್ಮಸ್ಥಳ ಭೇಟಿ

ಬೆಳ್ತಂಗಡಿ: ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವ ಎನ್.ಎಸ್. ಭೋಸರಾಜು ಮೇ 12ರಂದು ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಆಶೀರ್ವಾದ ಪಡೆದು ಸೌಹಾರ್ದಯುತ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸಹಿತ ಪ್ರಮುಖರು ಸಚಿವರ ಜೊತೆಗಿದ್ದರು.ಸಚಿವರನ್ನು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಗೌರವಿಸಿದರು.ಬಳಿಕ ದೇವರ ದರ್ಶನ ಮಾಡಿ, ವಿಶೇಷ ಪೂಜೆ ಸಲ್ಲಿಸದ ಸಚಿವರು ಭೋಜನದ ಬಳಿಕ ಕೊಕ್ಕಡ ಮೂಲಕ […]
ರಕ್ಷಿತ್ ಶಿವರಾಂ ಮುತುವರ್ಜಿಗೆ ಜಿಲ್ಲಾ ಕೆಡಿಪಿ ಸದಸ್ಯ ಸಂತೋಷ್ ಕುಮಾರ್ರಿಂದ ಅಭಿನಂದನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಜನರ ಬಹುದಿನದ ಬೇಡಿಕೆಯಾಗಿದ್ದ ಗುರುವಾಯನಕೆರೆಯಿಂದ ಉಪ್ಪಿನಂಗಡಿವರೆಗಿನ ರಾಜ್ಯ ಹೆದ್ದಾರಿ ಅಭಿವೃದ್ಧಿಗೆ ರಾಜ್ಯ ಸರ್ಕಾರ 13 ಕೋಟಿ ರೂಪಾಯಿ ಅನುದಾನ ಬಿಡುಗಡೆ ಮಾಡಿದ್ದು; ಇದಕ್ಕಾಗಿ ಖುದ್ದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿಯವರಿಗೆ ಸಮಸ್ಯೆ ಕುರಿತು ಮನವರಿಕೆ ಮಾಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಸದ್ರಿ ಕಾಮಗಾರಿಗೆ ಅನುದಾನ ಬಿಡುಗಡೆಗೊಳಿಸುವಂತೆ ಒತ್ತಾಯಿಸುವ ಮೂಲಕ ಜನತೆಯ ಸಂಕಷ್ಟ ನೀಗಿಸಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಅವರ ಕಾರ್ಯ ಅಭಿನಂದನಾರ್ಹ. ಬೆಂಗಳೂರಿನಲ್ಲಿ ಇತ್ತೀಚೆಗೆ ಮುಖ್ಯಮಂತ್ರಿ […]
ನೇಣು ಬಿಗಿದುಕೊಂಡು ಸಾವಿಗೆ ಶರಣು

ಬೆಳ್ತಂಗಡಿ: ಯುವಕನೊಬ್ಬ ನೇಣು ಬಿಗಿದುಕೊಂಡು ಸಾವಿಗೆ ಶರಣಾದ ಘಟನೆ ಬೆಳ್ತಂಗಡಿ ತಾಲೂಕಿನ ಲಾಯ್ಲದಿಂದ ವರದಿಯಾಗಿದೆ.ಬೆಳ್ತಂಗಡಿ ತಾಲೂಕಿನ ಲಾಯ್ಲ ಗ್ರಾಮದ ಪ್ರಗತಿನಗರ ಕಾಶಿಬೆಟ್ಟು ನಿವಾಸಿ ಲಿಂಗಪ್ಪ ಎಂಬವರ ಪುತ್ರ ಎಲೆಕ್ಟ್ರಿಷಿಯನ್ ವೃತ್ತಿ ಮಾಡುತ್ತಿದ್ದ ಕೇಶವ (34) ಎಂಬಾತ ಎಪ್ರಿಲ್ 26ರಂದು ರಾತ್ರಿ ಮನೆಯಲ್ಲಿ ನೇಣುಬಿಗಿದಕೊಂಡು ಸಾವಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ. ಸಾವಿಗೆ ಶರಣಾಗಲು ಕಾರಣ ತಿಳಿದುಬಂದಿಲ್ಲ. ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿ ತನಿಖೆ ನಡೆಯುತ್ತಿದೆ.
ಧರ್ಮಸ್ಥಳದಲ್ಲಿ 54ನೇ ಉಚಿತ ಸಾಮೂಹಿಕ ವಿವಾಹ ವೈಭವ ನಾಳೆ

ಬೆಳ್ತಂಗಡಿ: ನಾಡಿನ ಪವಿತ್ರ ಕ್ಷೇತ್ರ ಹಾಗೂ ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳದಲ್ಲಿ ನಾಳೆ ಬುಧವಾರ ಸಂಜೆ ಗಂಟೆ 6-40ಕ್ಕೆ ಗೋಧೂಳಿ ಲಗ್ನ ಸುಮುಹೂರ್ತದಲ್ಲಿ ಐವತ್ತನಾಲ್ಕನೆ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ ನಡೆಯಲಿದೆ.ಈಗಾಗಲೆ 105 ಜೊತೆ ವಧು-ವರರು ವಿವಾಹಕ್ಕಾಗಿ ಹೆಸರು ನೋಂದಾಯಿಸಿದ್ದು, ಅವರು ಕೊಟ್ಟ ದಾಖಲೆಗಳ ಮೂಲ ಪ್ರತಿಗಳನ್ನು ಪರಿಶೀಲಿಸಿದ ಬಳಿಕ ಅವರಿಗೆ ಸಾಮೂಹಿಕ ವಿವಾಹದಲ್ಲಿ ಅವಕಾಶ ನೀಡಲಾಗುವುದು.ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳಸೂತ್ರ ಮತ್ತು ಹೂವಿನಹಾರ ನೀಡಲಾಗುವುದು. ಮದುವೆಯ […]
ಎಪ್ರಿಲ್ 15, 16 ಮಡಂತ್ಯಾರಿನಲ್ಲಿ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ
ಬೆಳ್ತಂಗಡಿ: ಎಪ್ರಿಲ್ ತಿಂಗಳ 15 ಮತ್ತು 16ನೇ ತಾರೀಕಿನಂದು ಮಡಂತ್ಯಾರಿನ ಸೇಕ್ರೆಡ್ ಹಾರ್ಟ್ ಕಾಲೇಜಿನ ಕ್ರೀಡಾಂಗಣದಲ್ಲಿ ಮಂಗಳೂರು ವಿಶ್ವವಿದ್ಯಾನಿಲಯದ ಅಂತರ್ ಕಾಲೇಜು ಬಾಲ್ ಬ್ಯಾಡ್ಮಿಂಟನ್ ಪಂದ್ಯಾಟ ನಡೆಯಲಿದೆ ಎಂದು ಕಾಲೇಜಿನ ಪ್ರಾಂಶುಪಾಲ ಅಲೆಕ್ಸ್ ಐವನ್ ಸಿಕ್ವೇರಾ ತಿಳಿಸಿದರು.ಅವರು ಎಪ್ರಿಲ್ 13ರಂದು ಬೆಳ್ತಂಗಡಿಯ ಪ್ರೆಸ್ಕ್ಲಬ್ನಲ್ಲಿ ಕರೆಯಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಪಂದ್ಯಾಟದ ಬಗ್ಗೆ ವಿವರಣೆ ನೀಡುತ್ತಿದ್ದರು. ಪಂದ್ಯಾಟಕ್ಕೆ ಈಗಾಗಲೇ ವಿದ್ಯಾರ್ಥಿಗಳ ವಿಭಾಗದಲ್ಲಿ ಹತ್ತು ತಂಡಗಳು ಮತ್ತು ವಿದ್ಯಾರ್ಥಿನಿಯರ ವಿಭಾಗದಲ್ಲಿ ಹತ್ತು ತಂಡಗಳು ನೋಂದಾವಣೆ ಮಾಡಿಕೊಂಡಿದೆ. ಪಂದ್ಯಾಟದಲ್ಲಿ ಗೆದ್ದ ವಿದ್ಯಾರ್ಥಿಗಳ ತಂಡಕ್ಕೆ […]
ನಾವೂರಿನಲ್ಲಿ ಶೈಕ್ಷಣಿಕ ಮಾಹಿತಿ ಕಾರ್ಯಾಗಾರ
ಬೆಳ್ತಂಗಡಿ: ನಾವೂರು ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ವಠಾರದಲ್ಲಿ ಎಪ್ರಿಲ್ 5ನೇ ತಾರೀಕಿನಂದು ನಾವೂರು ಶ್ರೀ ಗೋಪಾಲಕೃಷ್ಣ ಸೇವಾ ಟ್ರಸ್ಟ್ (ರಿ) ಇದರ ನೇತೃತ್ವದಲ್ಲಿ ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಸರ್ವೋದಯ ಟ್ರಸ್ಟ್ (ರಿ) ನಾವೂರು ಇವುಗಳ ಸಹಭಾಗಿತ್ವದಲ್ಲಿ ಎಸ್ಎಸ್ಎಲ್ಸಿ ಮುಗಿಸಿದ ವಿದ್ಯಾರ್ಥಿಗಳಿಗೆ ಮುಂದಿನ ಶಿಕ್ಷಣ ಅವಕಾಶಗಳ ಕುರಿತು ಸಮಗ್ರ ಮಾಹಿತಿಯ ‘ಶೈಕ್ಷಣಿಕ ಮಾಹಿತಿ ಕಾರ್ಯಾಗಾರ’ ಕಾರ್ಯಕ್ರಮವು ನಡೆಯಿತು. ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ರೋಟರಿ ಕ್ಲಬ್ನ ಅಧ್ಯಕ್ಷರಾದ ರೋ. ಡಾ. ಪ್ರಕಾಶ್ ಪ್ರಭು ನೆರವೇರಿಸಿ ‘ಗ್ರಾಮೀಣ ಭಾಗದ […]
ಬಿಜೆಪಿಯ ಸ್ಥಾಪನಾ ದಿನ
ಬೆಳ್ತಂಗಡಿ: ಬಿಜೆಪಿ ಸ್ಥಾಪನಾ ದಿನವನ್ನು ಏಪ್ರಿಲ್ 06ರಂದು ಬೆಳ್ತಂಗಡಿಯ ಪಕ್ಷದ ಕಚೇರಿಯಲ್ಲಿ ಆಚರಿಸಲಾಯಿತು. ದಿನದ ಮಹತ್ವ ವನ್ನು ಮನ್ ಕೀ ಬಾತ್ ಜಿಲ್ಲಾ ಸಂಚಾಲಕರಾದ ಸೀತಾರಾಮ್ ಬಿ.ಎಸ್. ತಿಳಿಸಿದರು. ಮಂಡಲ ಅಧ್ಯಕ್ಷರಾದ ಶ್ರೀನಿವಾಸ್ ರಾವ್ ಧರ್ಮಸ್ಥಳ ಶುಭಹಾರೈಕೆ ಮಾಡಿದರು. ವಿಧಾನ ಪರಿಷತ್ ಶಾಸಕರಾಗಿರುವ ಪ್ರತಾಪ್ಸಿಂಹ ನಾಯಕ್ ಉಪಸ್ಥಿತರಿದ್ದರು, ಮಂಡಲ ಪ್ರಧಾನ ಕಾರ್ಯದರ್ಶಿ ಪ್ರಶಾಂತ್ ಪಾರೆಂಕಿ ಸ್ವಾಗತಿಸಿ, ಪ್ರಧಾನ ಕಾರ್ಯದರ್ಶಿ ಜಯಾನಂದ ಗೌಡ ಧನ್ಯವಾದವಿತ್ತರು. ಪಕ್ಷದ ಪ್ರಮುಖರು ಉಪಸ್ಥಿತರಿದ್ದರು. r
ಉಜಿರೆಯಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳ’ಎಸ್ಡಿಎಂ ಉದ್ಯೋಗಂ -2026′

ಬೆಳ್ತಂಗಡಿ: ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಇದರ ಆಶ್ರಯದಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪಾಲಿಟೆಕ್ನಿಕ್ ಕಾಲೇಜು ಸಹಯೋಗದಲ್ಲಿ ಉಜಿರೆಯಲ್ಲಿ ಎಪ್ರಿಲ್ 6 ಮತ್ತು 7 ರಂದು ‘ಎಸ್ಡಿಎಂ ಉದ್ಯೋಗಂ 2026’ ಬೃಹತ್ ಉದ್ಯೋಗ ಮೇಳ ನಡೆಯಲಿದೆ ಎಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಪ್ರಾಂಶುಪಾಲ ಪ್ರೊ. ವಿಶ್ವನಾಥ ಪಿ. ಅವರು ಕಾಲೇಜಿನಲ್ಲಿ ಎಪ್ರಿಲ್ 2ರಂದು ನಡೆದ ಪತ್ರಿಕಾಗೋಷ್ಟಿಯಲ್ಲಿ ಹೇಳಿದರು.ಉದ್ಯೋಗ […]
ಜೈನರ ನಿಯೋಗದಿಂದ ಸಿಎಂ ಭೇಟಿ

ಬೆಳ್ತಂಗಡಿ: ಕರ್ನಾಟಕ ಸರಕಾರದ ಮುಖ್ಯಮಂತ್ರಿ ಸಿದ್ದರಾಮಯ್ಯನವರನ್ನು ಮೇ 25ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭೇಟಿ ಮಾಡಿದ ಜೈನ ಧರ್ಮೀಯರ ನಿಯೋಗ ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಇರುವ ಸಮಸ್ಯೆಗಳನ್ನು ಮನವರಿಕೆ ಮಾಡಲಾಯಿತು. ಈ ಸಂದರ್ಭದಲ್ಲಿ ನಾಭಿರಾಜ್ ಜೈನ್, ಬೆಂಗಳೂರು, ಡಾ. ಕೆ. ಜಯಕೀರ್ತಿ ಜೈನ್ ಧರ್ಮಸ್ಥಳ, ಸುದರ್ಶನ್ ಜೈನ್ ಬಂಟ್ವಾಳ, ವಿಜಯ ಕುಮಾರ್ ಕಾರ್ಯತ್ತಡ್ಕ, ಧನಕೀರ್ತಿ ಶೆಟ್ಟಿ ಧರ್ಮಸ್ಥಳ, ಶಶಿಕಿರಣ್ ಜೈನ್ ಬೆಳ್ತಂಗಡಿ, ಪಣಿರಾಜ್ ಜೈನ್ ಕೊಕ್ಕಡ, ಪ್ರಜ್ವಲ್ ಜೈನ್ ಅಳದoಗಡಿ ಮತ್ತಿತರರು ಹಾಜರಿದ್ದರು.